ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.