News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

423

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್‍ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್‍ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..

ನೀರು:-

ನೀರು ನೈಸರ್ಗಿಕ ಡಿಟೊಕ್ಸಿಫೈಯರ್‍ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಜೇನುತುಪ್ಪ:-

ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್‍ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.

 

ಶುಂಠಿ:-

ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.

ಕ್ಯಾಮೋಮೈಲ್ ಟೀ:-

ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.

ಜಿನ್ಸೆಂಗ್:-

ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.

ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-

ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ

 

ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…