News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

424

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್‍ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್‍ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..

ನೀರು:-

ನೀರು ನೈಸರ್ಗಿಕ ಡಿಟೊಕ್ಸಿಫೈಯರ್‍ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಜೇನುತುಪ್ಪ:-

ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್‍ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.

 

ಶುಂಠಿ:-

ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.

ಕ್ಯಾಮೋಮೈಲ್ ಟೀ:-

ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.

ಜಿನ್ಸೆಂಗ್:-

ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.

ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-

ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ

 

ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…