ವಿಸ್ಮಯ ಜಗತ್ತು

ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

985

ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ  ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…

ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.

ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.

ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!

ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.

ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.

ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.

ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.

ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…