ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…