ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…