ವಿಸ್ಮಯ ಜಗತ್ತು

ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

1014

ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ  ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…

ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.

ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.

ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!

ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.

ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.

ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.

ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.

ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .