ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…