ಸುದ್ದಿ

“ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

28

ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು.

ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರೇವಣ್ಣ ಅವರು ಪ್ರತಿ ದಿನವೂ ದೇವಾಲಯಕ್ಕೆ ಹೋಗುತ್ತಾರೆ.ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ. ಆಂಜನೇಯ ಸ್ವಾಮಿ ದೇವಾಲಯದಲ್ಲಿ ನಿಂಬೆಹಣ್ಣು ಕೊಡುತ್ತಾರೆ. ಮಹಾಲಕ್ಷ್ಮಿ ದೇವಾಲಯದಲ್ಲಿ ಏಲಕ್ಕಿ ಹಾರ ಕೊಡುತ್ತಾರೆ. ಏಲಕ್ಕಿ ಹಾರವನ್ನು ರೇವಣ್ಣ ಅವರು ಕೊರಳಿಗೆ ಹಾಕಿಕೊಳ್ಳುತ್ತಾರೆ.

ದೇವಾಲಯದಲ್ಲಿ ಕೊಟ್ಟ ನಿಂಬೆಹಣ್ಣು ಪಡೆದ ಮಾತ್ರಕ್ಕೆ ಮಾಟಮಂತ್ರ ಮಾಡುತ್ತಾರೆ ಎಂದರೆ ಹೇಗೆ. ನಮ್ಮದು ಅಂತಹ ಕುಟುಂಬವಲ್ಲ. ನಾವು ದೇವರನ್ನು ನಂಬಿದ್ದೇವೆ. ದೇವರ ಮೇಲೆ ಭಯ ಭಕ್ತಿ ಇದೆ. ಪೂಜೆ ಮಾಡುತ್ತೇವೆ ಎಂದರು.ಬಿಜೆಪಿಯವರು ಹಿಂದೂ ಸಂಸ್ಕøತಿ ರಾಮನ ಬಗ್ಗೆ ಮಾತನಾಡುತ್ತೀರಿ. ನೀವು ರಾಮನ ಹೆಸರಿನಲ್ಲೇ ಅಧಿಕಾರಕ್ಕೆ ಬಂದವರು. ನೀವು ದೇವಾಲಯಕ್ಕೆ ಹೋಗುವುದಿಲ್ಲವೇ ಎಂದು ಛೇಡಿಸಿದರು.

ಹುಚ್ಚಾಸ್ಪತ್ರೆಗೆ ಸೇರುವ ಪರಿಸ್ಥಿತಿ ಬರುವುದಿಲ್ಲ:

ಯಂತಹ ಕಠಿಣ ಪರಿಸ್ಥಿತಿ ಸವಾಲು ಎದುರಾದರೂ ಎದುರಿಸುವಂತಹ ಶಕ್ತಿಯನ್ನು ದೇವರು ಕೊಟ್ಟಿದ್ದಾನೆ. ಭೂಮಿಯ ಮೇಲೆ ಬದುಕಿರುವವರೆಗೂ ತಾವು ಹುಚ್ಚಾಸ್ಪತ್ರೆಗೆ ಸೇರುವಂತಹ ಪರಿಸ್ಥಿತಿ ಬರುವುದಿಲ್ಲ. ಕುಮಾರಸ್ವಾಮಿ ಪರಿಸ್ಥಿತಿ ನೋಡಿದರೆ ಹುಚ್ಚಾಸ್ಪತ್ರೆಗೆ ಸೇರುವಂತಿದೆ ಎಂದು ಟೀಕಿಸಿದ್ದಾರೆ. ಇದಕ್ಕಾಗಿ ಇಂತಹ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದರು.

ಜನರಿಗೆ ದ್ರೋಹ ಮಾಡಬೇಡಿ:

ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೆಂಬ ಆಸೆ ಇಲ್ಲ. ಈ ಸ್ಥಾನ ಅಪ್ರಸ್ತುತ. ನಿಮ್ಮನ್ನು ಆಯ್ಕೆ ಮಾಡಿದ ಜನರಿಗೆ ದ್ರೋಹ ಮಾಡಬೇಡಿ ಎಂದು ಶಾಸಕರಲ್ಲಿ ಮನವಿ ಮಾಡಿದರು. ನಮಗೆ ದ್ರೋಹ ಮಾಡಿದರೂ ಚಿಂತೆಯಿಲ್ಲ ಎಂದರು.ತಾವು ಮುಖ್ಯಮಂತ್ರಿ ಯಾದ ದಿನವೇ ಈ ಸ್ಥಾನ ಯಕಶ್ಚಿತ್ ಎಂದು ತಿಳಿದವನು. ನನಗೆ ಯಾವ ಆತಂಕವೂ ಇಲ್ಲ. ವಿಧಿಯಾಟ. ದೇವರು ಕೊಟ್ಟ ಪದವಿ ಇದು. ದೇವರ ಇಚ್ಛೆಯಂತೆ ಆಗಲಿ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.