ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…