ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…