ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…