News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

1029

ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.

ತುಳಸಿ:-

ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್‌ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್‌ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.

ಬೇಕಿಂಗ್ ಪೌಡರ್:-

ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್‌ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್‌ನೊಂದಿಗೆ ಬೆರೆಸಿ, ಈ ಪೇಸ್ಟ್‌ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಕಿತ್ತಳೆ ಹಣ್ಣಿನ ಸಿಪ್ಪೆ:-

ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.

*ಅಲೋವೆರಾ ಜೆಲ್:-

ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಬಾಳೇಹಣ್ಣಿನ ಸಿಪ್ಪೆ:-

ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.

ಬೆಳ್ಳುಳ್ಳಿ:-

ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಉಪಯುಕ್ತ ಮಾಹಿತಿ

    ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

    ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…