ಸಂಬಂಧ

ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

1490

ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು  ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

ಹೌದು.ಉತ್ತರಪ್ರದೇಶದ ಶಹಜಹಾನ್‍ಪುರದಲ್ಲಿ ನಡೆದ ಒಂದು ಮದುವೆಯಲ್ಲಿ, ವರ ನಾಗಿಣಿ ಡ್ಯಾನ್ಸ್ ಮಾಡಿದ್ದರಿಂದ ವಧು ಮದುವೆಯನ್ನೇ ತಿರಸ್ಕರಿಸಿದ್ದಾಳೆ.

ಉತ್ತರಪ್ರದೇಶದ ಶಹಜಹಾನ್‍ಪುರದ ಪ್ರಿಯಾಂಕಾ ತ್ರಿಪಾಠಿ ಮತ್ತು ಅನುಭವ್ ಮಿಶ್ರಾ ಅವರ ಮದುವೆಯನ್ನು ಕುಟುಂಬಸ್ಥರು ನಿಗದಿ ಮಾಡಿದ್ದರು. ಎಲ್ಲಾ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರನು ಕುಡಿದ ಸ್ಥಿತಿಯಲ್ಲಿ, ನಾಗಿಣಿ ಡ್ಯಾನ್ಸ್ ಮಾಡಿ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾನೆ.

ವರ ಅನುಭವ್ ಮಿಶ್ರಾ ಮಾಡಿದ ನಾಗಿಣಿ ಡ್ಯಾನ್ಸ್ ನಿಂದ ಮುಜುಗರವಾದ ಕಾರಣ, ಇನ್ನೇನು ಮದುವೆಯ ಶಾಸ್ತ್ರಗಳು ಆರಂಭವಾಗಬೇಕಿದ್ದ ಕೆಲವೇ ಸಮಯದ ಮುಂಚೆ ವಧು ಮದುವೆ ನಿರಾಕರಿಸಿದ್ದಾಳೆ.

ವರನ ಸಂಬಂಧಿಕರು ಹಾಗೂ ಸ್ನೇಹಿತರು ವಧು ಪ್ರಿಯಾಂಕಾಳ ಮನವೊಲಿಸಲು ಪ್ರಯತ್ನಿಸಿದರಾದ್ರೂ ಆಕೆ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ವಧುವಿನ ತಂದೆಯೂ ಕೂಡ ಮಗಳ ನಿರ್ಧಾರವನ್ನು ಬೆಂಬಲಿಸಿದ್ದಾರೆ. ವರ ಮಾಡಿದ ಕೆಲಸದಿಂದ ನಿಜಕ್ಕೂ ಮುಜುಗರ ಅನುಭವಿಸಬೇಕಾಯ್ತು. ಆದ್ದರಿಂದ ನಾನು ನನ್ನ ಮಗಳ ಪರ ನಿಲ್ಲಬೇಕಾಯ್ತು ಎಂದು ಅವರು ಹೇಳಿದ್ದಾರೆ.

 

ಕೊನೆಗೆ ಪ್ರಿಯಾಂಕಾ ಮರುದಿನವೇ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…