ಕರ್ನಾಟಕದ ಸಾಧಕರು

ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

6337

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.

ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ…

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್‌ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್‌ನ ಹೀತ್ರೂ ಇಂಟರ್‌ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸುಧಾಮೂರ್ತಿಯವರ ಸರಳ ಉಡುಗೆ…

ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.

ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಸುಧಾಮೂರ್ತಿಗೆ ಆ ಮಹಿಳೆ ಹಿಯಾಳಿಸಿದ್ದು ಹೇಗೆ..?

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.

ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್‌ ನಿರ್ವಹಿಸಿದ್ದು ಏರ್‌ಪೋರ್ಟ್‌ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.

ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!

ಸುಧಾಮೂರ್ತಿ ಕೊಟ್ಟ ಕೌಂಟರ್‌ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಇಂತಹ ಸರಳತೆಯ ಸುಧಾಮೂರ್ತಿಯವರ ಬಗ್ಗೆ ಒಂದು ಕಿರು ಪರಿಚಯ…

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಸುಧಾಮುರ್ತಿಯವರು ಪಡೆದಿರುವ ಪ್ರಶಸ್ತಿಗಳು…

  • ಬಿ.ಇ.(ಇಲೆಕ್ಟ್ರಿಕಲ್ ಇಂಜನಿಯರಿಂಗ್ ಪರೀಕ್ಷೆ) ಯಲ್ಲಿ ಪ್ರಥಮ ಸ್ಥಾನ ಲಭಿಸಿದಾಗ ಕರ್ನಾಟಕದ ಮುಖ್ಯ ಮಂತ್ರಿಗಳಿಂದ ಬೆಳ್ಳಿಯ ಪದಕ ಲಭಿಸಿತ್ತು.
  • ಎಮ್.ಟೆಕ್. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ದೊರೆತಾಗ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ದಿಂದ ಬಂಗಾರದ ಪದಕ ದೊರೆತಿತ್ತು.
  • 1995ರಲ್ಲಿ ಬೆಂಗಳೂರಿನ ರೋಟರಿ ಕ್ಲಬ್ ನಿಂದ ಬೆಸ್ಟ್ ಟೀಚರ್ ಪುರಸ್ಕಾರ ದೊರೆತಿದೆ.
  • ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾದವರಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
  • ಸಮಾಜಸೇವೆಗಾಗಿ ಹುಬ್ಬಳ್ಳಿ ದಕ್ಷಿಣ ಭಾಗದ ರೋಟರಿ ಕ್ಲಬ್ ನಿಂದ ಪುರಸ್ಕಾರ ದೊರೆತಿದೆ.
  • 2000 ನೆಯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.
  • ಸಮಾಜಸೇವೆಗಾಗಿ 2000 ಸಾಲಿನ ಓಜಸ್ವಿನಿ ಪ್ರಶಸ್ತಿ ದೊರೆತಿದೆ.
  • ಮಿಲೆನಿಯಮ್ ಮಹಿಳಾ ಶಿರೋಮಣಿಪ್ರಶಸ್ತಿ ಲಭಿಸಿದೆ.
  • ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜನಿಯರಿಂಗ್‌ ಪ್ರತಿಷ್ಠಾನ ಪ್ರಶಸ್ತಿ (2001),
  • “ಶಾಲೆ ಮಕ್ಕಳಿಗಾಗಿ ಕಂಪ್ಯೂಟರ್” ಈ ಕೃತಿಗೆ ಅತ್ತಿಮಬ್ಬೆ ಪ್ರಶಸ್ತಿ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • Health

    ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು…

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…