karnataka

ನಾಳೆ ಕರ್ನಾಟಕ ಬಂದ್!!! ಆಗುತ್ತಾ ಇಲ್ವ, ಮುಂದೆ ಓದಿ…

568

ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ  ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್​​​ ಗೊಂದಲ್ಲಿದೆ. ಯಾಕೆಂದರೆ ಬಂದ್​​’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.

ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್‌ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು  ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ.  ಬಸ್‌ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್‌ಗಳು, ಶಾಲಾ ಕಾಲೇಜುಗಳು, ಹೋಟೆಲ್‌ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…