karnataka

ನಾಳೆ ಕರ್ನಾಟಕ ಬಂದ್!!! ಆಗುತ್ತಾ ಇಲ್ವ, ಮುಂದೆ ಓದಿ…

571

ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ  ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್​​​ ಗೊಂದಲ್ಲಿದೆ. ಯಾಕೆಂದರೆ ಬಂದ್​​’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.

ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್‌ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು  ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ.  ಬಸ್‌ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್‌ಗಳು, ಶಾಲಾ ಕಾಲೇಜುಗಳು, ಹೋಟೆಲ್‌ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…