ಆರೋಗ್ಯ

ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

200

ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.

ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.

ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.

ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-

  • ನಮ್ಮ ತ್ವಚೆ ಉತ್ತಮವಾಗಿರಲು,
  • ಚರ್ಮದಡಿ ಸಂಗ್ರಹವಾಗಿರುವ ವಿಷಕಾರಿ ವಸ್ತುಗಳನ್ನು ಮತ್ತು ಸೋಂಕುಕಾರಕ ಕಣಗಳನ್ನು ನಿವಾರಿಸಲೂ ನೀರುಬೇಕು.
  • ವಿಶೇಷವಾಗಿ ಜೀವರಾಸಾಯನಿಕ ಪ್ರಕ್ರಿಯೆ ಉತ್ತಮವಾಗಿ ನಡೆಯಲು,
  • ತಿಂದ ಆಹಾರವನ್ನು ಪಚನಗೊಳಿಸಲು,
  • ಶಕ್ತಿವೃದ್ಧಿಸಲು,
  • ಏಕಾಗ್ರತೆ ಪ‌ಡೆಯಲು ನೀರು ಅತ್ಯಗತ್ಯ.

ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪ‌ಡಿಸಿಕೊಂಡು ಕುಡಿಯುವುದು ಒಳ್ಳೆಯದು.

ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.

ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್‌ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.

ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.

ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.

ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.

ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.

ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

    ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ….

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…