ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…