ಆರೋಗ್ಯ

ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

2921

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

  • ಕೂದಲಿನ ಬುಡಕ್ಕೆ ನಿಂಬೆರಸವನ್ನು ತಿಕ್ಕಿ ಹತ್ತು ನಿಮಿಷ ಬಿಟ್ಟು ಸ್ನಾನ ಮಾಡಿದರೆ ತಲೆಯ ಹೊಟ್ಟು ಕಡಿಮೆಯಾಗುತ್ತದೆ.
  • ಜ್ವರದಿಂದ ಬಳಲಿಕೆ ಉಂಟಾದಾಗ ನಿಂಬೆರಸವನ್ನು ಸೇವಿಸಿದರೆ ಬಳಲಿಕೆ ಕಡಿಮೆಯಾಗುತ್ತದೆ.
  • ಸ್ವಲ್ಪ ಕಡಲೆಹಿಟ್ಟಿಗೆ  ಜೇನುತ್ತುಪ್ಪ ಮತ್ತು ನಿಂಬೆರಸ ಸೇರಿಸಿ ಕಲೆಸಿ ಮುಖಕ್ಕೆ ಲೇಪಿಸಿ 1 ಘಂಟೆಯ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು ಇದರ ಉಪಯೋಗದಿಂದ ಮುಖದ ಜಿಡ್ಡು ,ಕೊಳೆ ಹೋಗಿ ಮುಖದ ಕಾಂತಿ ಹೆಚ್ಚುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-

*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.

*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.

*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.

*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.

*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ  ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.

*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.

*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.

*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.

*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…