ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…