ಹಣ ಕಾಸು

ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

909

ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.

1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)

ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.

2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)

ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.

3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)

ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.

4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.

ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.

5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ

ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.

6. ಫಿಕ್ಸೆಡ್ ಡಿಪೋಸಿಟ್

ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.

7. ಇನ್ಸುರೆನ್ಸೆ  ಪ್ರೀಮಿಯಂ ಪೇಮೆಂಟ್

ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.

8. ಆದಾಯ ತೆರಿಗೆ ಪಾವತಿಸಿ

ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.

9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ

ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು

10.ಚೆಕ್ ಬುಕ್ ಗಾಗಿ ಕೋರಿಕೆ

ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.

11. ಖಾತೆ ವರ್ಗಾವಣೆ ಮಾಡಬಹುದು.

ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು.  ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.

12.ಮೊಬೈಲ್ ಬ್ಯಾಂಕಿಂಗ್ ನೋಂದಣಿ

ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.

13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ

ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.

14. ರೈಲ್ವೆ  ಟಿಕೆಟ್  ಬುಕಿಂಗ್ ಮಾಡಿ

ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.

15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು

ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಜ್ಯೋತಿಷ್ಯ

    ಹನುಮಂತನ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…