ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ
ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.
ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ. ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?
ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .
ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 % ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.
ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.
… ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…