ಉಪಯುಕ್ತ ಮಾಹಿತಿ

ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

842

ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ…

ಅಡುಗೆ ಮನೆ ಔಷಧಾಲಯ:-

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿ:-

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.

ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

 

ಸಾಸಿವೆ:

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ :

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಜೀರಿಗೆ :

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಕೊತ್ತಂಬರಿ (ಧನಿಯಾ) :

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

 

ಬೆಳ್ಳುಳ್ಳಿ :

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅರಿಶಿಣ:

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.

ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.

ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್‌ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.

ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…