ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…