ಆರೋಗ್ಯ

ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

1208

ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ.  ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.

ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್‍ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.

ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್‍ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.

ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???

ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-

  • ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು.
  • ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
  • ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ.  ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.

 

 

ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-

  •   ನೀವು ಆರೋಗ್ಯ ತಪಾಸಣೆ ಅವಕಾಶ ಪಡೆಯುತ್ತೀರಿ.
  • ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ.
  • ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆಂದು ತಿಳಿಯಬಹುದು.

ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ  ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.

ನೆನಪಿಡಿ:-  ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.

ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….      

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಸುದ್ದಿ

    12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

    ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್‌ಎಲ್‌ ಕಂಪನಿಯ ಸಿಎಫ್‍ಒ…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…