ಆರೋಗ್ಯ

ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

1189

ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ.  ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.

ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್‍ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.

ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್‍ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.

ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???

ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-

  • ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು.
  • ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
  • ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ.  ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.

 

 

ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-

  •   ನೀವು ಆರೋಗ್ಯ ತಪಾಸಣೆ ಅವಕಾಶ ಪಡೆಯುತ್ತೀರಿ.
  • ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ.
  • ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆಂದು ತಿಳಿಯಬಹುದು.

ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ  ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.

ನೆನಪಿಡಿ:-  ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.

ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….      

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಆರೋಗ್ಯ

    ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.