News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

1212

ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ.  ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.

ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್‍ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.

ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್‍ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.

ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???

ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-

  • ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು.
  • ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
  • ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ.  ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.

 

 

ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-

  •   ನೀವು ಆರೋಗ್ಯ ತಪಾಸಣೆ ಅವಕಾಶ ಪಡೆಯುತ್ತೀರಿ.
  • ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ.
  • ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆಂದು ತಿಳಿಯಬಹುದು.

ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ  ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.

ನೆನಪಿಡಿ:-  ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.

ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….      

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಆರೋಗ್ಯ

    “ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

    ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…