ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು ಸೇವಿಸತಕ್ಕದು.
ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.
ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.
ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.
ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.
ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…