ಉಪಯುಕ್ತ ಮಾಹಿತಿ

ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

427

ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ. ಮೊದಲ ಕಂತಿನ ಹಣ ಆಧಾರ್ ಇಲ್ಲದೆ ಸಿಗಲಿದೆ. ಆದ್ರೆ ಎರಡನೇ ಕಂತಿನ ಹಣ ಪಡೆಯುವ ಮೊದಲು ರೈತ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಈವರೆಗೂ ಆಧಾರ್ ಕಾರ್ಡ್ ಹೊಂದಿರದ ರೈತರು ತಕ್ಷಣ ಆಧಾರ್ ಕಾರ್ಡ್ ಮಾಡಿಸಿಕೊಂಡಲ್ಲಿ ಯೋಜನೆ ಲಾಭ ಪಡೆಯಬಹುದಾಗಿದೆ.

ಆಧಾರ್ ಕಾರ್ಡ್ ಪಡೆಯುವುದು ದೊಡ್ಡ ಕೆಲಸವೇನಲ್ಲ. ವೆಬ್ ಸೈಟ್ ನಲ್ಲಿ ನಿಮಗೆ ಫಾರ್ಮ್ ಸಿಗಲಿದೆ. https://appointments.uidai.gov.in ವೆಬ್ ಸೈಟ್ ಗೆ ಹೋಗಿ ನೀವು ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು. ಫಾರ್ಮ್ ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳನ್ನು ನೀಡಬೇಕಾಗುತ್ತದೆ. ಇದೇ ವೆಬ್ ಸೈಟ್ ನಲ್ಲಿ ಹತ್ತಿರ ಯಾವ ಯಾವ ಆಧಾರ್ ಕಾರ್ಡ್ ಸೆಂಟರ್ ಇದೆ ಎಂಬ ಮಾಹಿತಿ ಸಿಗಲಿದೆ. ಅಲ್ಲಿಗೆ ಹೋಗಿ ಅರ್ಜಿ ಜೊತೆ ದಾಖಲೆ ನೀಡಿ ಆಧಾರ್ ಗೆ ಅರ್ಜಿ ಸಲ್ಲಿಸಬಹುದು.

ಆಧಾರ್ ಕಾರ್ಡ್, ಅಂಚೆ ಕಚೇರಿ ಮೂಲಕ ನಿಮ್ಮ ಮನೆಗೆ ಬರಲಿದೆ. ಒಂದು ವೇಳೆ ಅಂಚೆ ಕಚೇರಿ ಮೂಲಕ ಆಧಾರ್ ಕಾರ್ಡ್ ಮನೆಗೆ ಬರದೆ ಹೋದಲ್ಲಿ ವೆಬ್ ಸೈಟ್ ನಲ್ಲಿರುವ ಆಧಾರ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…