ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

5543

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…