ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.
ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.
ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).
ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.
ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.
ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ
ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.
ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.
ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.
ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.
ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.
ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.
ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.
ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.
ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.
ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….
ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.