News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

5692

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.