ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.
ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.
ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).
ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.
ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.
ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ
ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.
ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.
ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.
ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.
ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.
ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.
ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.
ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.
ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.
ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….
ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…