News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

5729

ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.

ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.

ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).

ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.

ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.

ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ

ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.

ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.

ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.

ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.

ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.

ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.

ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.

ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.

ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….

ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.