ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

572

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.