ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

575

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…