ಜ್ಯೋತಿಷ್ಯ

ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

564

ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವೃಷಭ:-

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ಮಿಥುನ:

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

 

ಕಟಕ :-

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

 

 

 ಸಿಂಹ:

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾ :-

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

 

ತುಲಾ:

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ವೃಶ್ಚಿಕ :-

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

 

ಧನಸ್ಸು:

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಮಕರ :-

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

 

ಕುಂಭ:-

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮೀನ:-

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…