ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ.
ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ ಪರಿಹಾರವನ್ನು ಕಂಡುಕೊಳ್ಳಬಹುದು.

ಹಲ್ಲು ನೋವು ಬಂದಾಗ ಹಲ್ಲುಗಳ ಮಧ್ಯ ಹಸಿಶುಂಠಿಯ ತುಂಡನ್ನು ಇಟ್ಟುಕೊಂಡಿದ್ದರೆ ಹಲ್ಲು ನೋವು ಶಮನವಾಗುವುದು.

ಬೆಳ್ಳುಳ್ಳಿಯನ್ನು ಜಜ್ಜಿ ರಸವನ್ನು ತೆಗೆದು, ಆ ರಸವನ್ನು ಹಲ್ಲಿನ ನೋವು ಇರುವ ಭಾಗಕ್ಕೆ ಹಚ್ಚಿಕೊಳ್ಳಿ. ಇದು ನಿಮ್ಮ ಹಲ್ಲು ನೋವನ್ನು ನಿವಾರಿಸಲು ಪರಿಣಾಮಕಾರಿಯಾಗಿ ನೆರವಾಗುತ್ತದೆ.ಹಾಗೆ ಬೆಳ್ಳುಳ್ಳಿ ಮತ್ತು ಸೈಂಧವ ಉಪ್ಪನ್ನು ಬೆರೆಸಿ ನೋವಿರುವ ಹಲ್ಲಿನ ಮೇಲೆ ಇಟ್ಟುಕೊಂಡರೆ ಹಲ್ಲು ನೋವು ಕಡಿಮೆಯಾಗುತ್ತದೆ.
*ಪಪ್ಪಾಯದ ಎಲೆ ಹಾಗೂ ತೊಗಟೆ ಕಷಾಯವನ್ನು ಉಪಯೋಗಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ.

ಸ್ವಲ್ಪ ಪ್ರಮಾಣದ ಲವಂಗದ ಎಣ್ಣೆಯನ್ನು ತೆಗೆದುಕೊಳ್ಳಿ. ಅದರಿಂದ ಮೃದುವಾಗಿ ಬ್ರಷ್ ಮಾಡಿ. ಇದನ್ನು ನೋವಿರುವ ಭಾಗಕ್ಕೆ ಬಳಸುವಾಗ ಸ್ವಲ್ಪ ಜಾಗರೂಕರಾಗಿರಿ. ಹೆಚ್ಚು ಒತ್ತಡವನ್ನು ನೀಡದೆ ಬ್ರಷ್ ಮಾಡಿ. ಇಲ್ಲವಾದಲ್ಲಿ ನಿಮ್ಮ ನೋವು ಮತ್ತಷ್ಟು ಹೆಚ್ಚಾಗಬಹುದು. ಲವಂಗದ ಎಣ್ಣೆಯನ್ನು ದವಡೆಗಳ ಮೇಲೆ ಹಾಕಿ ಮೃದುವಾಗಿ ಮಸಾಜ ಮಾಡಿ.

ಮೆಣಸು ಮತ್ತು ಉಪ್ಪನ್ನು ಸಮ ಪ್ರಮಾಣದಲ್ಲಿ ಮಿಶ್ರಣ ಮಾಡಿಕೊಂಡು ನೀರಿನ ಹನಿ ಹಾಕಿ ಪೇಸ್ಟ್ ಮಾಡಿ. ಈ ಮಿಶ್ರಣವನ್ನು ನೋವಿರುವ ಹಲ್ಲಿಗೆ ಹಚ್ಚಿ ಕೆಲವು ನಿಮಿಷಗಳ ಕಾಲ ಬಿಡಿ. ನಂತರ ತೊಳೆಯಿರಿ.ಹೀಗೆ ಆದಷ್ಟೂ ಪ್ರತೀ ದಿವಸ ಮಾಡಿ.ನಿಮ್ಮ ಹಲ್ಲು ನೋವು ಕಡಿಮೆಯಾಗುವುದಲ್ಲದೆ, ನಿಮ್ಮ ವಸದುಗ್ಲು ಗಟ್ಟಿಯಾಗುವವು..

ಒಂದು ಚಮಚ ತೆಂಗಿನೆಣ್ಣೆಯನ್ನು ಬಾಯಿಯಲ್ಲಿ ಹಾಕಿಕೊಳ್ಳಿ. 30 ನಿಮಿಷಗಳ ಕಾಲ ಬಾಯಿಯಲ್ಲಿ ಇದನ್ನು ಹಾಕಿಕೊಂಡು ಆಗಾಗ ಮುಕ್ಕುಳಿಸುತ್ತ ಇರಿ. ನಂತರ ಇದನ್ನು ಉಗಿದು ಬಾಯಿಯನ್ನು ಚೆನ್ನಾಗಿ ತೊಳೆಯಿರಿ. ಇದರಿಂದ ನಿಮ್ಮ ಹಲ್ಲು ನೋವು ಕಡಿಮೆಯಾಗುತ್ತದೆ.

ಹಲ್ಲು ನೋವಿಗೆ ಉಪ್ಪು ತಕ್ಷಣದ ನೋವು ನಿವಾರಕವಾಗಿ ಕೆಲಸಕ್ಕೆ ಬರುವ ಅಂಶವಾಗಿದೆ. ಬೆಚ್ಚನೆಯ ನೀರಿಗೆ ಸ್ವಲ್ಪ ಉಪ್ಪುನ್ನು ಬೆರೆಸಿ ಅದರಿಂದ ಬಾಯಿಯನ್ನು ಮುಕ್ಕುಳಿಸಿ. ಇದನ್ನು ಕೆಲವು ಬಾರಿ ರಿಪೀಟ್ ಮಾಡಿದಾಗ ನಿಮ್ಮ ಹಲ್ಲು ನೋವು ಕಡಿಮೆಯಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….