ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2107

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…