ರೆಸಿಪಿ

ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

996

ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

ಇದಕ್ಕೆಲ್ಲಾ ಒಂದೇ ಪರಿಹಾರ. ನಿಮ್ಮ ಮನೆಯಲ್ಲೇ ಪಾನಿ ಪುರಿ ತಯಾರಿಸಿ. ಹಾಗಾದ್ರೆ “ಪಾನಿಪುರಿ” ತಯಾರಿಸಲು ಹೇಗೆಂದು ತಿಳಿಯಲು ಮುಂದೆ  ಓದಿ…

ತಯಾರಿಸಲು ಬೇಕಾಗುವ ಸಾಮಗ್ರಿಗಳು:- 

ಪಾನಿತಯಾರಿಸಲು ಕೊತ್ತಂಬರಿ ಸೊಪ್ಪು – 1 ಕಟ್ಟು

ಪುದೀನಾ ಸೊಪ್ಪು – 1 ಕಟ್ಟು

ಹಸಿಮೆಣಸಿನಕಾಯಿ – 2 ರಿಂದ 3

ಹುಣಸೆಹಣ್ಣು – ದೊಡ್ಡ ನಿಂಬೆಗಾತ್ರದಷ್ಟು

ನಿಂಬೆಹಣ್ಣು – 1

ಕಾಳುಮೆಣಸು – 2 ಟೀ ಚಮಚ

ಜೀರಿಗೆ – 2 ಟೀ ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಕುದಿಸಿ ಆರಿಸಿದ ನೀರು – ಸುಮಾರು ಒಂದೂವರೆ ಲೀಟರ್

ಆಲೂ ಪಲ್ಯ ತಯಾರಿಸಲು: 

ಒಂದು ದೊಡ್ಡ ಆಲೂಗಡ್ಡೆ

ಕೆಂಪು ಮೆಣಸಿನ ಪುಡಿ – 1 / 2 ಚಮಚ

ಕಾಳುಮೆಣಸಿನ ಪುಡಿ – 1 / 4 ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಮಾವಿನ ಹಣ್ಣಿನ ಪುಡಿ  – 1 / 4 ಚಮಚ /ನಾಲ್ಕಾರು ಹನಿ ನಿಂಬೆರಸ

ಈರುಳ್ಳಿ – 1

ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ

ತಯಾರಿಸುವ ವಿಧಾನ : 

  • ಕರಿಮೆಣಸು, ಜೀರಿಗೆಯನ್ನು ಹುರಿದು ಪುಡಿಮಾಡಿಕೊಳ್ಳಿ. ಹರಳು ಉಪ್ಪನ್ನು ಸೇರಿಸುವುದಾದರೆ ಅದನ್ನೂ ಸ್ವಲ್ಪ ಹುರಿದುಕೊಳ್ಳಬೇಕು.
  • ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಹುಣಸೆಹಣ್ಣು, ಹಸಿಮೆಣಸು ಇಷ್ಟನ್ನೂ ಸ್ವಲ್ಪ ನೀರು ಸೇರಿಸಿ ರುಬ್ಬಿ, ಚೆನ್ನಾಗಿ ಸೋಸಿ ಇಟ್ಟುಕೊಳ್ಳಬೇಕು.
  • ಸೋಸಿಕೊಂಡ ರಸಕ್ಕೆ ಬೇಕಾದಷ್ಟು ನೀರನ್ನು ಸೇರಿಸಿ, ಪುಡಿಮಾಡಿದ ಜೀರಿಗೆ, ಕರಿಮೆಣಸನ್ನು ಸೇರಿಸಿ. ರುಚಿಗೆ ತಕ್ಕಂತೆ ಉಪ್ಪು ಮತ್ತು ನಿಂಬೆರಸವನ್ನು ಸೇರಿಸಿ ಕಲಸಬೇಕು. ಇದರ ರುಚಿ ಉಪ್ಪು, ಹುಳಿ, ಖಾರ ಹದವಾಗಿರಲಿ.

ಆಲೂ ಪಲ್ಯ :

  • ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಬೇಕು.
  • ಆಲೂಗಡ್ಡೆಯನ್ನು ಬೇಯಿಸಿ, ಕೈಗಳಿಂದ ಹಿಸುಕಿ ಮೆತ್ತಗೆ ಹಿಟ್ಟಿನಂತೆ ಮಾಡಿಕೊಳ್ಳಬೇಕು.
  • ಇದಕ್ಕೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನ ಪುಡಿ, ಪುಡಿಮಾಡಿದ ಕಾಳುಮೆಣಸು, ಉಪ್ಪು, ಹುಳಿ ಎಲ್ಲವನ್ನೂ ಸೇರಿಸಿ ಚೆನ್ನಾಗಿ ಮಿಶ್ರಮಾಡಬೇಕು.
  • ಈಗ ಗೋಲ್ ಗಪ್ಪಾ ಅಥವಾ ಪೂರಿಯನ್ನು ತೆಗೆದುಕೊಂಡು ಕೈಯಿಂದ ಒತ್ತಿ ಒಂದು ಮೇಲ್ಮೈಯಲ್ಲಿ ತೂತು ಮಾಡಿಕೊಂಡು ಪೂರಿಯ ಅರ್ಧಭಾಗದವರೆಗೆ ಪಲ್ಯವನ್ನು ತುಂಬಿ, ನಂತರ ಉಳಿದರ್ಧಕ್ಕೆ ಪಾನಿಯನ್ನು ತುಂಬಿಸಿದರೆ ರುಚಿಕರವಾದ ಪಾನಿಪುರಿ ರೆಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…