ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…