News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

813

ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ.  ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.

ಇದನ್ನ ಸರಿ ಮಾಡುವುದಕ್ಕೆ ಸಾವಿರಾರು ರೂಪಾಯಿಗಳು ಖರ್ಚು ಮಾಡುತ್ತಾರೆ. ಆದರೆ ಇನ್ಮುಂದೆ ಹಾಗೇ ಮಾಡಬೇಡಿ. ಅದನ್ನ ಸರಿಪಡಿಸುವ ಟ್ರಿಕ್ಸ್ ನಾವು ಹೇಳಿ ಕೊಡುತ್ತೇವೆ…

1. ಮೊಬೈಲ್ ಸ್ವಿಚ್ ಆಫ್ ಮಾಡಿ…

ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

2. ನಿಮ್ಮ ಫೋನ್’ನ ಭಾಗಗಳನ್ನುಬಿಚ್ಚಿಡಿ…

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.

3.  ಬಿಸಿಲಿನಲ್ಲಿ ಇಡಿ…

ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.

ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

4.   ಅಕ್ಕಿಯೊಳಗೆ ಇಡಿ…

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

5.  ಇದನ್ನು ಮಾಡಲೇಬೇಡಿ..!

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ  ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

6.  ಅತೀ ಹೆಚ್ಚು ಬಿಸಿಲಿನಲ್ಲಿ ಇಡಬೇಡಿ…

ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…