ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.
ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.
ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.
ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-
ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.
ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.
ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.
ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…