ಆಧ್ಯಾತ್ಮ

ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

1783

ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.

ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ  ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.

ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ  ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ  ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.

 

ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-

  1. ಏನಾದರೂ ಮಾಡುತಿರು ತಮ್ಮ…

ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ  ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ  ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.

  1. ಪ್ರೀತಿ ಇರಲಿ ಸಕಲವಸ್ತುಗಳಲಿ…

ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ  ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.

  1. ನಂಬಿ ಕೆಟ್ಟವರಿಲ್ಲವೋ…

ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ  ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.

ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಉಪಯುಕ್ತ ಮಾಹಿತಿ

    ರೆಫ್ರಿಜರೇಟರ್, ಏರ್‍ಕಂಡಿಷನರ್,ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳು ಕಡಿಮೆ ಬೆಲೆಯಲ್ಲಿ ದೊರಿಯಳಿವೆ..!ತಿಳಿಯಲು ಇದನ್ನು ಓದಿ..

    ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.