ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.
ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.
ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.
ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-
ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.
ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.
ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.
ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.