inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

349

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇತಿಹಾಸ ನಿರ್ಮಿಸಿದ ಇಸ್ರೋ…..

    ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.