inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

349

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

    ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ದೇಶ-ವಿದೇಶ

    ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

    ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.