inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

336

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.