ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.
ಉಪ್ಪುನೀರಿನ ಮುಕ್ಕಳಿಕೆ:-
ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.
ಪುದಿನಾ ಎಣ್ಣೆ:-
ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.
ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.
ಲ್ಯಾವೆಂಡರ್ ಎಣ್ಣೆ:-
ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ
ಗೊಂಡೆಹೂವಿನ ದಳಗಳು:-
ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.
ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-
ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.
ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-
ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…